ಆ ನೀಲಿ ಹೊದಿಕೆಯನ್ನ ಚೂರೇ ಬಿಚ್ಚಿ, ಒಳಗಿನ ಬಂಗಾರದಪ್ಪುಗೆಯನ್ನ ಹಗೂರ ಬೇರ್ಪಡಿಸುತ್ತ, ಒಳಗಿನ ಲಘುಕಂದು ಬಣ್ಣದ ಚೌಕಗಳ ಘಮವನ್ನ ಹಾಗೇ ಒಮ್ಮೆ ಒಳಗೆಳೆದುಕೊಂಡು, ಅದರ ರುಚಿಗೆ ನನ್ನನ್ನೇ ಕೊಟ್ಟುಕೊಳ್ಳುತ್ತ ಚಾಕಲೇಟು ಕಡಿಯುವುದಂದರೆ ನನಗೆ ಸ್ವರ್ಗಸುಖ. ಮತ್ತು ಈ ಸ್ವರ್ಗ ನಿತ್ಯವೂ ನನ್ನ ಅಂಗೈಲಿ. ಈ ಕಾರಣಕ್ಕೇ ಬಹುಶಃ ನನ್ನ ಮುಖ ಹುಣ್ಣಿಮೆ ಚಂದ್ರನ ಹಾಗೆ ಕಲೆಮಯವೂ ಕುಳಿಪೂರ್ಣವೂ ಆಗಿರುವುದು. ಚಿಂತಿಯೇನಿಲ್ಲ. ಅಷ್ಟಕ್ಕೆಲ್ಲ ಚಾಕಲೇಟು ತಿನ್ನುವ ಸುಖವನ್ನ ಬಿಟ್ಟುಕೊಡಲಾಗುತ್ತೆಯೇ? ಚಾಕಲೇಟು ಬಿಟ್ಟರೆ, ಆ ಸುಖವನ್ನ ಕೊಡೋದು ಕಾಫಿ ಮಾತ್ರ.... Continue Reading →
ಈ ಹಾಳಾದವ ಸಿಗದೆಹೋಗಿದ್ದರೆ….
ಮೊನ್ನೆ ಸಣ್ಣಗೆ ಮಳೆ ಬಿದ್ದು ಹೋಯ್ತು. ಈ ಹೊತ್ತು ಬೆವರಲ್ಲಿ ಮೈಯೆಲ್ಲ ಒದ್ದೆಒದ್ದೆ. ಫ್ಯಾನಿನ ತಣ್ಣನೆ ಗಾಳಿಗೆ ಬೆವರಿನ ಮೈ ಆರಿ ಒಂಥರಾ ಅಂಟು. ಮಗ್ಗಲು ಬದಲಿಸಿದರೆ, ಹರಡಿಟ್ಟ ಪುಸ್ತಕ ರಾಶಿ. ಅಗೋ ಅಲ್ಲಿ, ಅವುಗಳ ಮಧ್ಯ ಗೆಳೆಯನೊಬ್ಬ ಹಾವು ಹಾವು ಅಂತ ಕನವರಿಸ್ಕೊಂಡು ಬರೆದಿಟ್ಟ ಕವನ ಪುಸ್ತಕ. ಅದನ್ನ ಓದಿಕೊಳ್ತಲೇ ಮಲಗಿದ್ದಕ್ಕೋ ಏನೋ ಕನಸ ತುಂಬ ಹಾವು. ಅದೊಂದಕ್ಕೆ ಅವನ ಕಣ್ಣು. ಕಾಣಬಾರದಂತೆ ಹಾವು ಕನಸಲ್ಲಿ. ಹಾವಂದರೆ ಕಾಮವಂತೆ! ಗೊತ್ತಿರೋದು ಇಷ್ಟೇನೇ... ಹಾವಂದರೆ ಅಧ್ಯಾತ್ಮ ಕೂಡ!... Continue Reading →
ರಾಧೇ, ಎದೆಯ ಕಸ ಹೇಗೆ ಗುಡಿಸಿದೆಯೆ?
ಇವತ್ತು ನನಗೆ ಝಾಡಮಾಲಿಯ ಕೆಲಸ. ಎದೆಯೊಳಗಿನ ಕೋಣೆಯೊಂದರ ಸಫಾಯಿ ಮಾಡಬೇಕಿದೆ. ಅದು ಗುಟ್ಟುಗುಟ್ಟಿನ ಖಾಸಗಿ ಕೋಣೆ. ಅದರ ತುಂಬ ಈಗ ನೆನಪಿನ ಕಸ ತುಂಬಿ ಹಾಳುಬಿದ್ದಿದೆ. ಮೊದಲೆಲ್ಲ ಅಲ್ಲಿ ಇರುತ್ತಿದ್ದನಲ್ಲ ಆ ಹುಡುಗ, ಅವಂಗೇನೋ ರಾಜಕಾರ್ಯವಂತೆ, ಎದ್ದು ಹೋಗಿಬಿಟ್ಟ. “ನಾಳೆಯಿಂದ ನಿನ್ನ ಮರೀತೇನೆ" ಅಂತ ಪತ್ರ ಬರೆದಿದ್ದ. ಯಾವ ನಾಳೆ ನನ್ನ ಮರೆತನೋ, ಮರಳಿ ಬರುವ ಮಾತಂತೂ ಇನ್ನು ಇಲ್ಲ. ಈ ಕೋಣೆಯ ಕನ್ನಡಿಯಲ್ಲಿ ಅರೆ! ಅವನ ಬಿಂಬ ನಗುತ್ತಲೇ ಇದೆ. ‘ಒಡೆಯನೆಲ್ಲಿ?’ ನನ್ನ ಕಂಡ ಬಿಂಬಕ್ಕೆ... Continue Reading →
