ಕನ್ನಡದ ರುಚಿಕಟ್ಟಾದ ಕತೆಗಾರ ಪೂರ್ಣಚಂದ್ರ ತೇಜಸ್ವಿಗೆ ಒಮ್ಮೆ ಅವರ ಕತೆಯ ಪಾತ್ರಗಳೇ ಜೀವಂತವಾಗಿ ಸಿಕ್ಕು ನಮ್ಮ ಬಗ್ಗೆ ಯಾಕೆ ಬರೆದಿರಿ ಅಂತ ಜಗಳ ಹೂಡಿ ಹೋಗಿದ್ದ ಅನುಭವವಾಗಿತ್ತಂತೆ. ’ಕರ್ವಾಲೋ’ ಕಾದಂಬರಿಯ ಎಂಗ್ಟ ಮತ್ತು ಕರಿಯ ಹನ್ನೆರಡು- ಹದಿಮೂರು ವರ್ಷಗಳ ನಂತರ ಬಂದು ವ್ಯಾಜ್ಯ ಹೂಡಿದ್ದನ್ನ ಅವರು ’ಪರಿಸರದ ಕತೆ’ಯಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚಿಗೆ ನನ್ನ ಗೆಳೆಯನಿಗೂ ಇಂಥದೇ ಅನುಭವ ಆಯಿತು. ಅಂವ ಬರೆದ ಸಾಮತಿಯನ್ನ ಸೀರಿಯಸ್ಸಾಗಿ ತೆಗೆದುಕೊಂಡ ಮಹಾಶಯರೊಬ್ಬರು ’ನನ್ನ ಕತೆ ಯಾಕೆ ಬರೆದೆ? ನಾನೇನೂ ಅಂಥವ ಅಲ್ಲ’... Continue Reading →
