ಮಾರ್ಚ್ ೨೭ರ ಯುಗಾದಿಯ ದಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ವಿಶೇಷವೇನೂ ಇರಲಿಲ್ಲ. ಸಿಬ್ಬಂದಿಗಳೊಂದಷ್ಟು ಜನ ಯೂನಿಫಾರಮ್ಮಲ್ಲದೆ ಸಾಮಾನ್ಯ ಉಡುಗೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಅವತ್ತು ಹಬ್ಬ ಎಂಬುದರ ಸಾಕ್ಷಿಯಾಗಿತ್ತಷ್ಟೆ. ಯುಗಾದಿಯ ದಿನವನ್ನ ಕಾರಾಗೃಹದಲ್ಲಿರುವ ಸಹೋದರರ ಜೊತೆ ಕಳೆಯಬೇಕು, ದೇಶ ಪ್ರೇಮ ಉದ್ದೀಪಿಸುವ ಗೀತ ಗಾಯನ ನಡೆಸಿಕೊಡಬೇಕು ಎಂದೆಲ್ಲ ಉಮ್ಮೇದಿಯೊಂದಿಗೆ ಹೋಗಿದ್ದ ಜಾಗೋಭಾರತ್ ತಂಡಕ್ಕೆ, ಅಲ್ಲಿ ಎದುರಾದ ವಾತಾವರಣ ಅಷ್ಟೇನೂ ಪ್ರೋತ್ಸಾಹದಾಯಕವಾಗಿರಲಿಲ್ಲ. “ನೋಡೋಣ, ಎಷ್ಟು ಸಾಧ್ಯವೋ ಅಷ್ಟು ಹಾಡಿ ಬರೋಣ. ನಮ್ಮ ಸಂಕಲ್ಪ ನಾವು ನೆರವೇರಿಸುವುದಷ್ಟೆ ನಮ್ಮ ಕೆಲಸ.... Continue Reading →
