ಮೊನ್ನೆವರೆಗೂ ಸೃಜನ್ ಚೆಂದದ ಚಿತ್ರಗಳನ್ನು ಬರೆಯುತ್ತಾರೆ, ಸೊಗಸಾದ ವಿನ್ಯಾಸ ಮಾಡುತ್ತಾರೆ ಎಂದಷ್ಟೆ ಗೊತ್ತಿದ್ದ ನನಗೆ, ಅವರು ಕಥೆಯನ್ನೂ ಕವನವನ್ನೂ ಬರೆಯುವುದಲ್ಲದೆ ಒಳ್ಳೆಯ ಅನುವಾದವನ್ನೂ ಮಾಡುತ್ತಾರೆಂದು ತಿಳಿಯಿತು. ನಮ್ಮ ವಾರಗೆಯ ಬರಹಗಾರರ ಬಗ್ಗೆ ಇರುವ ಅಜ್ಞಾನಕ್ಕೆ ನಾಚಿಕೆಯಾಗುವುದರ ಜೊತೆಗೇ ಓದಿನ ಕೊರತೆ ಮುಖಕ್ಕೆ ಹೊಡೆದಂತಾಯ್ತು! ಈ ಜ್ಞಾನೋದಯವಾಗಿದ್ದು, ಸೃಜನ್ ಅವರ ‘ಯಶೋಧರೆ, ಈ ವ್ಯಥೆಯೇತಕೆ?’ ಎಂಬ ಅನುವಾದಿತ ಕವಿತೆಯನ್ನೋದಿದಾಗ. ಈ ಕವಿತೆಯ ಮೂಲ ತೆಲುಗಿನದು. ಅಲ್ಲಿನ ಸ್ತ್ರೀ ಸಂವೇದನೆಯ ಕವಯತ್ರಿ ಡಾ.ಜಯಪ್ರಭಾ ಅವರ ಅದೇ ಹೆಸರಿನ ಕವನ ಸಂಕಲನದ... Continue Reading →
